ಬಸವಣ್ಣ   
  ವಚನ - 17     
 
ಇಂದಿಗೆಂತು ನಾಳಿಗೆಂತು ಎಂದು ಬೆಂದ ಒಡಲ ಹೊರೆಯ ಹೋಯಿತ್ತೆನ್ನ ಸಂಸಾರ ! ಹಿಂದೆ ನಾನಾಯೋನಿಯಲ್ಲಿ ಬಂದೆನೆಂಬ ಹೇಯವಿಲ್ಲಾ; ಮುಂದೆ ಮುಕ್ತಿಯಾಗಬೇಕೆಂಬ ಯುಕ್ತಿಯಿಲ್ಲಾ; ಎಂದೆಂದೂ ಸದಾಶಿವನ ಕುಂದದೆ ನೆನೆಯಲೀಯದೆ ಕೊಂದುದಯ್ಯಾ ಈ ಮಾಯೆ, ಕೂಡಲ ಸಂಗಮದೇವಾ.