ಬಸವಣ್ಣ   
  ವಚನ - 20     
 
ಸಂಸಾರವೆಂಬ ಸರ್ಪ ಮುಟ್ಟಲು ಪಂಚೇಂದ್ರಿಯ ವಿಷಯವೆಂಬ ವಿಷದಿಂದ ಆನು ಮುಂದುಗೆಟ್ಟೆನಯ್ಯಾ; ಆನು ಹೊರಳಿ ಬೀಳುತ್ತಿದ್ದೆನಯ್ಯಾ. 'ಓಂ ನಮಃ ಶಿವಾಯ' ಎಂಬ ಮಂತ್ರವ ಜಪಿಸುತ್ತಿದ್ದೆನಯ್ಯಾ, ಕೂಡಲ ಸಂಗಮದೇವಾ.