ಬಸವಣ್ಣ   
  ವಚನ - 23     
 
ಲೇಸ ಕಂಡು ಮನ ಬಯಸಿ ಬಯಸಿ ಆಸೆ ಮಾಡಿದೊಡಿಲ್ಲ ಕಂಡಯ್ಯಾ! ತಾಳಮರಕ್ಕೆ ಕೈಯ ನೀಡಿ ಮೇಲೆ ನೋಡಿ ಗೋಣು ನೊಂದುದಯ್ಯಾ! ಕೂಡಲ ಸಂಗಮದೇವ, ಕೇಳಯ್ಯಾ, ನೀನೀವ ಕಾಲಕ್ಕಲ್ಲದಿಲ್ಲ ಕಂಡಯ್ಯಾ !