ಬಸವಣ್ಣ   
  ವಚನ - 29     
 
ಎನ್ನ ಚಿತ್ತವು ಅತ್ತಿಯ ಹಣ್ಣು, ನೋಡಯ್ಯಾ; ವಿಚಾರಿಸಿದೊಡೇನೂ ಹುರುಳಿಲ್ಲವಯ್ಯಾ! ಪ್ರಪಂಚಿನ ಡಂಬಿನಲ್ಲಿ ಎನ್ನನೊಂದು ರೂಹ ಮಾಡಿ ನೀವಿರಿಸಿದಿರಿ, ಕೂಡಲ ಸಂಗಮದೇವಾ.