ಬಸವಣ್ಣ   
  ವಚನ - 32     
 
ಕೊಂಬೆಯ ಮೇಲಣ ಮರ್ಕಟನಂತೆ ಲಂಘಿಸುವುದೆನ್ನ ಮನವು; ನಿಂದಲ್ಲಿ ನಿಲ್ಲಲೀಯದೆನ್ನ ಮನವು ಹೊಂದಿದಲ್ಲಿ ಹೊಂದಲೀಯದೆನ್ನ ಮನವು! ಕೂಡಲ ಸಂಗಮದೇವಾ ನಿಮ್ಮ ಚರಣಕಮಲದಲ್ಲಿ ಭ್ರಮರನಾಗಿರಿಸು, ನಿಮ್ಮ ಧರ್ಮ!