ಬಸವಣ್ಣ   
  ವಚನ - 46     
 
ಆಸೆಯಾಮಿಷ, ತಾಮಸ, ಹುಸಿ, ವಿಷಯ, ಕುಟಿಲ, ಕುಹಕ, ಕ್ರೋಧ, ಕ್ಷುದ್ರ, ಮಿಥ್ಯೆ- ಇವನೆನ್ನ ನಾಲಗೆಯ ಮೇಲಿಂದತ್ತ ತೆಗೆದು ಕಳೆಯಯ್ಯಾ ಅದೇಕೆಂದೊಡೆ, ನಿನ್ನತ್ತಲೆನ್ನ ಬರಲೀಯವು ಇದು ಕಾರಣ, ಇವೆಲ್ಲವ ಕಳೆದು ಎನ್ನ ಪಂಚೈವರ, ಭಕ್ತರ ಮಾಡು ಕೂಡಲ ಸಂಗಮದೇವಾ.