ಬಸವಣ್ಣ   
  ವಚನ - 48     
 
ಕಾಯವಿಕಾರ ಕಾಡಿಹುದಯ್ಯಾ ಮನೋವಿಕಾರ ಕೂಡಿಹುದಯ್ಯಾ. ಇಂದ್ರಿಯವಿಕಾರ ಸುಳಿವುದಯ್ಯಾ ! ಸುಳಿವಿನೊಳಗೆ ಸುಳಿಯುತ್ತಲಿದ್ದೇನೆ, ಸಿಲುಕಿಸದಿರಯ್ಯಾ ಅನ್ಯ ಚಿತ್ತವಿರಿಸದಿರಯ್ಯಾ; ನಿಮ್ಮ ಚಿತ್ತವಿರಿಸಯ್ಯಾ. ಅನುಪಮಸುಖಸಾರಾಯ ಶರಣರಲ್ಲಿ ಕೂಡಲ ಸಂಗಮದೇವಯ್ಯಾ, ಇದನೆ ಬೇಡುವೆನಯ್ಯಾ.