ಬಸವಣ್ಣ   
  ವಚನ - 73     
 
ಮುನ್ನ ಮಾಡಿದ ಪಾಪವೆಂತು ಹೋಹುದೆಂದು ಚಿಂತಿಸಬೇಡ: ಕಹಿಸೋರೆಯ ಕಾಯ ತಂದು ವಿಭೂತಿಯ ತುಂಬಿದೊಡೆ ಸಿಹಿಯಾಗದೆ ಮೂರು ದಿವಸಕ್ಕೆ? ಹಲವುಕಾಲ ಕೊಂದ ಸೂನೆಗಾರನ ಕತ್ತಿಯಾದರೇನು, ಪರುಷ ಮುಟ್ಟಲಿಕೆ ಹೊನ್ನಾಗದೆ ಅಯ್ಯಾ? ಲಲಾಟದಲ್ಲಿ ವಿಭೂತಿ ಬರೆಯಲಿಕೆ ಪಾಪ ಪಲ್ಲಟವಾಗದೆ, ಕೂಡಲ ಸಂಗಮದೇವಾ?