ಬಸವಣ್ಣ   
  ವಚನ - 82     
 
ಬಿಳಿಯ ಕರಿಕೆ, ಕಣಿಗಿಲೆಲೆಯ, ತೊರೆಯ ತಡಿಯ ಮಳಲ ತಂದು, ಗೌರಿಯ ನೋನುವ ಬನ್ನಿರೇ, ಚಿಕ್ಕ ಮಕ್ಕಳೆಲ್ಲರು ನೆರೆದು- ʼಅನುಪಮದಾನಿ ಕೂಡಲಸಂಗಮದೇವ ಗಂಡನಾಗಬೇಕೆಂದುʼ.