ಬಸವಣ್ಣ   
  ವಚನ - 92     
 
ಕುಂಬಳಕಾಯಿಗೆ ಕಬ್ಬುನದ ಕಟ್ಟ ಕೊಟ್ಟರೆ ಕೊಳೆವುದಲ್ಲದೆ ಬಲುಹಾಗಬಲ್ಲುದೆ? ಅಳಿಮನದವಂಗೆ ಶಿವದೀಕ್ಷೆಯ ಕೊಟ್ಟರೆ ಭಕ್ತಿ ಎಂತಹುದೊ? ಮುನ್ನಿನಂತೆ. ಕೂಡಲಸಂಗಯ್ಯಾ, ಮನಹೀನನ ಮೀಸಲ ಕಾಯ್ದಿರಿಸಿದಂತೆ!