ಬಸವಣ್ಣ   
  ವಚನ - 96     
 
ಒಳಗೆ ಕುಟಿಲ, ಹೊರಗೆ ವಿನಯವಾಗಿ ಭಕ್ತರೆನಿಸಿಕೊಂಬವರ ಬಲ್ಲನೊಲ್ಲನಯ್ಯಾ ಲಿಂಗವು! ಅವರು ಸತ್ಪಥಕ್ಕೆ ಸಲ್ಲರು, ಸಲ್ಲರಯ್ಯಾ. ಒಳಹೊರಗೊಂದಾಗದವರಿಗೆ ಅಳಿಯಾಸೆದೋರಿ ಬೀಸಾಡುವನವರ ಜಗದೀಶ ಕೂಡಲಸಂಗಮದೇವ!