ಬಸವಣ್ಣ   
  ವಚನ - 106     
 
ಅಂಗದಿಚ್ಛೆಗೆ ಮದ್ಯಮಾಂಸವ ತಿಂಬರು; ಕಂಗಳಿಚ್ಛೆಗೆ ಪರವಧುವ ನೆರೆವರು: ಲಿಂಗಲಾಂಛನಧಾರಿಯಾದಲ್ಲಿ ಫಲವೇನು? ಲಿಂಗಪಥವ ತಪ್ಪಿ ನಡೆವವರು ಜಂಗಮಮುಖದಿಂದ ನಿಂದೆ ಬಂದರೆ ಕೊಂಡ ಮಾರಿಂಗೆ ಹೋಹುದು ತಪ್ಪದು, ಕೂಡಲಸಂಗಮದೇವಾ!