ಬಸವಣ್ಣ   
  ವಚನ - 111     
 
ಹಾದರಕ್ಕೆ ಹೋದಡೆ, ಕಳ್ಳದಮ್ಮವಾಯಿತ್ತು; ಹಾಳುಗೋಡೆಗೆ ಹೋದರೆ, ಚೇಳೂರಿತ್ತು; ಅಬ್ಬರವ ಕೇಳಿ ತಳವಾರನುಟ್ಟ ಸೀರೆಯ ಸುಲಿದ; ನಾಚಿ ಹೋದರೆ ಮನೆಯ ಗಂಡ ಬೆನ್ನ ಬಾರನೆತ್ತಿದ; ಅರಸು ಕೂಡಲಸಂಗಮದೇವ ದಂಡವ ಕೊಂಡ!