ಬಸವಣ್ಣ   
  ವಚನ - 129     
 
ಹಬ್ಬಕ್ಕೆ ತಂದ ಹರಕೆಯ ಕುರಿ ತೋರಣಕ್ಕೆ ತಂದ ತಳಿರ ಮೇಯಿತ್ತು; ಕೊಂದಹರೆಂಬುದನರಿಯದೆ ಬೆಂದೊಡಲ ಹೊರೆಯ ಹೋಯಿತ್ತಲ್ಲದೆ! ಅದಂದೇ ಹುಟ್ಟಿತ್ತು, ಅದಂದೇ ಹೊಂದಿತ್ತು; ಕೊಂದವರುಳಿದರೇ ,ಕೂಡಲಸಂಗಮದೇವಾ?