ಬಸವಣ್ಣ   
  ವಚನ - 132     
 
ಹಾವು ತಿಂದವರ ನುಡಿಸಬಹುದು; ಗರ ಹೊಡೆದವರ ನುಡಿಸಬಹುದು; ಸಿರಿಗರ ಹೊಡೆದವರ ನುಡಿಸಲು ಬಾರದು ನೋಡಯ್ಯಾ! ಬಡತನವೆಂಬ ಮಂತ್ರವಾದಿ ಹೊಗಲು ಒಡನೆ ನುಡಿವರು, ಕೂಡಲಸಂಗಮದೇವಾ.