ಬಸವಣ್ಣ   
  ವಚನ - 137     
 
ಪರುಷ ಮುಟ್ಟಿದ ಬಳಿಕ ಕಬ್ಬುನವಾಗದು, ನೋಡಾ; ಲಿಂಗ ಮುಟ್ಟಿದ ಬಳಿಕ ಕುಚಿತ್ತಾಚಾರವಾಗದು, ಕೂಡಲಸಂಗನ ಶರಣರು ಅನ್ಯವನರಿಯರಾಗಿ.