ಬಸವಣ್ಣ   
  ವಚನ - 142     
 
ಎಂತಹವನಾದರೇನು, ಲಿಂಗವ ಮುಟ್ಟದವನೇ ಕೀಳುಜಾತಿ. ಕುಲವಹುದು ತಪ್ಪದು ಲಿಂಗ ಮುಟ್ಟಲೊಡನೆ: ಹೊನ್ನಹುದು ತಪ್ಪದು ಪರುಷ ಮುಟ್ಟಲೊಡನೆ. ಕೂಡಲಸಂಗಮದೇವನೊಲ್ಲ ಸರ್ವಸಂದೇಹಿಗಳ!