ಬಸವಣ್ಣ   
  ವಚನ - 156     
 
ಶಿವಚಿಂತೆ ಶಿವಜ್ಞಾನವಿಲ್ಲದ ಮನುಜರು- ಸಗಣಕ್ಕೆ ಸಾಸಿರ ಹುಳು ಹುಟ್ಟವೇ, ದೇವಾ? ಕಾಡ ಮೃಗವೊಂದಾಗಿರಲಾಗದೆ, ದೇವಾ? ಊರ ಮೃಗವೊಂದಾಗಿರಲಾಗದೆ, ಹರನೆ? ನಮ್ಮ ಕೂಡಲಸಂಗನ ಶರಣರಿಲ್ಲದ ಊರು, ದೇಶ- ವನವಾಸ, ನರವಿಂಧ್ಯ ಕಾಣಿರಣ್ಣಾ.