ಬಸವಣ್ಣ   
  ವಚನ - 158     
 
ವ್ಯಾಧನೊಂದು ಮೊಲನ ತಂದಡೆ ಸಲುವ ಹಾಗಕ್ಕೆ ಬಿಲಿವರಯ್ಯಾ. ನೆಲನಾಳ್ದನ ಹೆಣನೆಂದರೆ ಒಂದಡಕೆಗೆ ಕೊಂಬವರಿಲ್ಲ, ನೋಡಯ್ಯಾ! ಮೊಲನಿಂದ ಕರಕಷ್ಟ ನರನ ಬಾಳುವೆ! ಸಲೆನಂಬೋ ನಮ್ಮ ಕೂಡಲಸಂಗಮದೇವನ.