ಬಸವಣ್ಣ   
  ವಚನ - 161     
 
ನೆರೆ ಕೆನ್ನೆಗೆ, ತೆರೆ ಗಲ್ಲಕೆ, ಶರೀರ ಗೂಡುವೋಗದ ಮುನ್ನ, ಹಲ್ಲು ಹೋಗಿ, ಬೆನ್ನು ಬಾಗಿ, ಅನ್ಯರಿಗೆ ಹಂಗಾಗದ ಮುನ್ನ, ಕಾಲಮೇಲೆ ಕೈಯನೂರಿ ಕೋಲ ಹಿಡಿಯದ ಮುನ್ನ, ಮುಪ್ಪಿಂದೊಪ್ಪವಳಿಯದ ಮುನ್ನ, ಮೃತ್ಯು ಮುಟ್ಟದ ಮುನ್ನ- ಪೂಜಿಸು ನಮ್ಮ ಕೂಡಲಸಂಗಮದೇವನ.