ಬಸವಣ್ಣ   
  ವಚನ - 167     
 
ಶಕುನವೆಂದೆಂಬೆ, ಅವಶಕುನವೆಂದೆಂಬೆ- ನಿಮ್ಮವರು ಅಳಲಿಕೆ ಅಂದೇಕೆ ಬಂದೆ? ನಿಮ್ಮವರು ಅಳಲಿಕೆ ಇಂದೇಕೆ ಹೋದೆ? ನೀ ಹೋಹಾಗಳಕ್ಕೆ! ನೀ ಬಾಹಾಗಳಕ್ಕೆ! ಅಕ್ಕೆ ಬಾರದ ಮುನ್ನ ಪೂಜಿಸು ಕೂಡಲಸಂಗಮದೇವನ.