ಬಸವಣ್ಣ   
  ವಚನ - 169     
 
ಹರನೀವ ಕಾಲಕ್ಕೆ ಸಿರಿಯು ಬೆನ್ನಲ್ಲಿ ಬರ್ಕು. ಹರಿದು ಹೆದ್ದೊರೆಯೆ, ಕೆರೆ ತುಂಬಿದಂತಯ್ಯಾ! ನೆರೆಯದ ವಸ್ತು ನೆರೆವುದು ನೋಡಯ್ಯಾ. ಅರಸು ಪರಿವಾರ ಕೈವಾರ ನೋಡಯ್ಯಾ! ಪರಮನಿರಂಜನನೆ ಮರೆದ ಕಾಲಕ್ಕೆ ತುಂಬಿದ ಹರವಿಯ ಕಲ್ಲು ಕೊಂಡಂತೆ, ಕೂಡಲಸಂಗಮದೇವಾ.