ಬಸವಣ್ಣ   
  ವಚನ - 172     
 
ಹೊತ್ತಾರೆ ಎದ್ದು, ಅಗ್ಘವಣಿ ಪತ್ರೆಯ ತಂದು, ಹೊತ್ತು ಹೋಗದ ಮುನ್ನ ಪೂಜಿಸು ಲಿಂಗವ. ಹೊತ್ತು ಹೋದ ಬಳಿಕ ನಿನ್ನನಾರು ಬಲ್ಲರು? ಹೊತ್ತು ಹೋಗದ ಮುನ್ನ, ಮೃತ್ಯುವೊಯ್ಯದ ಮುನ್ನ ತೊತ್ತುಗೆಲಸವ ಮಾಡು ಕೂಡಲಸಂಗಮದೇವನ.