ಬಸವಣ್ಣ   
  ವಚನ - 191     
 
ದ್ವೈತಾದ್ವೈತವನೋದಿ ಏನ ಮಾಡುವಿರಯ್ಯಾ ನಮ್ಮ ಶರಣರಿಗುರಿಗರಗಾಗಿ ಕರಗದನ್ನಕ್ಕ? ಸ್ಥಾವರ ಜಂಗಮವೊಂದೆ ಎಂದು ನಂಬದನ್ನಕ್ಕ? ಕೂಡಲಸಂಗಮದೇವಾ, ಬರಿಯ ಮಾತಿನ ಮಾಲೆಯಲೇನಹುದು?