ಬಸವಣ್ಣ   
  ವಚನ - 194     
 
ಕಲ್ಲ ನಾಗರ ಕಂಡರೆ ಹಾಲನೆರೆಯೆಂಬರು: ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯಾ! ಉಂಬ ಜಂಗಮ ಬಂದರೆ ನಡೆಯೆಂಬರು: ಉಣ್ಣದ ಲಿಂಗಕ್ಕೆ ಬೋನವ ಹಿಡಿಯೆಂಬರಯ್ಯಾ! ನಮ್ಮ ಕೂಡಲಸಂಗನ ಶರಣರ ಕಂಡು ಉದಾಸೀನವ ಮಾಡಿದರೆ, ಕಲ್ಲ ತಾಗಿದ ಮಿಟ್ಟೆಯಂತಪ್ಪರಯ್ಯಾ!