ಬಸವಣ್ಣ   
  ವಚನ - 199     
 
ಮಾಡಿ ನೀಡಿ ಲಿಂಗವ ಪೂಜಿಸಿಹೆನೆಂಬವರು ನೀವೆಲ್ಲಾ ಕೇಳಿರಣ್ಣಾ: ಹಾಗದ ಕೆರಹ ಹೊರಗೆ ಕಳೆದು, ದೇಗುಲಕ್ಕೆ ಹೋಗಿ ದೇವರಿಗೆ ನಮಸ್ಕಾರವ ಮಾಡುವನಂತೆ- ತನ್ನ ಕೆರಹಿನ ಧ್ಯಾನವಲ್ಲದೆ ದೇವರ ಧ್ಯಾನವಿಲ್ಲಾ! ಧನವನಿರಿಸದಿರಾ, ಇರಿಸಿದರೆ ಭವ ಬಪ್ಪುದು ತಪ್ಪದು! ಕೂಡಸಂಗನ ಶರಣರಿಗೆ ಸವೆಸಲೇಬೇಕು.