ಬಸವಣ್ಣ   
  ವಚನ - 208     
 
ಶಾಸ್ತ್ರ ಘನವೆಂಬೆನೆ? ಕರ್ಮವ ಭಜಿಸುತ್ತಿದೆ! ವೇದ ಘನವೆಂಬೆನೆ? ಪ್ರಾಣಿವಧೆಯ ಹೇಳುತ್ತಿದೆ! ಸ್ಮೃತಿ ಘನವೆಂಬೆನೆ? ಮುಂದಿಟ್ಟರಸುತ್ತಿದೆ! ಅಲ್ಲೆಲ್ಲಿಯೂ ನೀವಿಲ್ಲದ ಕಾರಣ, ತ್ರಿವಿಧ ದಾಸೋಹದಲ್ಲಲ್ಲದೆ ಕಾಣಬಾರದು ಕೂಡಲಸಂಗಮದೇವನ!