ಬಸವಣ್ಣ   
  ವಚನ - 213     
 
ಹಲವು ಕಾಲ ಧಾವತಿಗೊಂಡು ಒಟ್ಟಿದ ಹಿದಿರೆಯು ಒಂದು ಮಿಡುಕುರಲ್ಲಿ ಬೇವಂತೆ, ಸಲೆ ನೆಲೆ ಸನ್ನಿಹಿತನಾಗಿರ್ಪ ಶರಣನ ಭಕ್ತಿ ಒಂದನಾಯತದಿಂದ ಕೆಡುವುದು. ಸ್ವಧರ್ಮದಲ್ಲಿ ಗಳಿಸಿದ ಪಿತನ ಧನವ ಅಧರ್ಮದಲ್ಲಿ ಕೆಡಿಸುವ ಸುತನಂತೆ- ಶಿವನ ಸೊಮ್ಮ ಶಿವಂಗೆ ಮಾಡದೆ, ಅನ್ಯಕ್ಕೆ ಮಾಡಿದೊಡೆ, ತನ್ನ ಭಕ್ತಿ ತನ್ನನೇ ಕೆಡಿಸುವುದು, ಕೂಡಲಸಂಗಮದೇವಾ.