ಬಸವಣ್ಣ   
  ವಚನ - 223     
 
ಪಾಪಿಯ ಧನ ಪ್ರಾಯಶ್ಚಿತ್ತಕ್ಕಲ್ಲದೆ ಸತ್ಪಾತ್ರಕ್ಕೆ ಸಲ್ಲದಯ್ಯಾ! ನಾಯ ಹಾಲು ನಾಯಿಗಲ್ಲದೆ, ಪಂಚಾಮೃತಕ್ಕೆ ಸಲ್ಲದಯ್ಯಾ. ನಮ್ಮ ಕೂಡಲಸಂಗನ ಶರಣರಿಗಲ್ಲದೆ ಮಾಡುವ ಅರ್ಥ ವ್ಯರ್ಥ, ಕಂಡಯ್ಯಾ!