ಬಸವಣ್ಣ   
  ವಚನ - 229     
 
ಹಡೆದೊಡವೆ-ವಸ್ತುವನು ಮೃಡಭಕ್ತರಿಗಲ್ಲದೆ ಕಡಬಡ್ಡಿಯ ಕೊಡಲಾಗದು. ಬಂದರೊಂದು ಲೇಸು, ಬಾರದಿದ್ದರೆರೆಡು ಲೇಸು!. ಅಲ್ಲಿದ್ದರೆಯೂ ಲಿಂಗಕ್ಕೆ ಬೋನ; ಇಲ್ಲಿದ್ದರೆಯೂ ಲಿಂಗಕ್ಕೆ ಬೋನ. ಲಿಂಗದೊಡವೆ ಲಿಂಗಕ್ಕೆ ಸಾರಿತ್ತಾಗಿ ಬಂದಿತ್ತೆಂಬ ಪರಿಣಾಮವಿಲ್ಲ, ಬಾರದೆಂಬ ದುಃಖವಿಲ್ಲ. ಇದುಕಾರಣ ಕೂಡಲಸಂಗಮದೇವಾ, ನಿಮ್ಮ ಶರಣರಿಗಲ್ಲದೆ, ಕಡಬಡ್ಡಿಯ ಕೊಡಲಾಗದು.