ಬಸವಣ್ಣ   
  ವಚನ - 230     
 
ಓಡಲಾರದ ಮೃಗವು ಸೊಣಗಂಗೆ ಮಾಂಸವ ಕೊಡುವಂತೆ ಮಾಡಲಾಗದು ಭಕ್ತನು, ಕೊಳಲಾಗದು ಜಂಗಮ, ಹಿರಿಯರು ನರಮಾಂಸವ ಭುಂಜಿಸುವರೆ? ತನುವುಕ್ಕಿ ಮನವುಕ್ಕಿ ಮಾಡಬೇಕು ಭಕ್ತಿಯ ಮಾಡಿಸಿಕೊಳ್ಳಬೇಕು ಜಂಗಮ, ಕೂಡಲಸಂಗಮದೇವಾ.