ಬಸವಣ್ಣ   
  ವಚನ - 231     
 
ಬಂದುದ ಕೈಕೊಳ್ಳಬಲ್ಲರೆ ನೇಮ, ಇದ್ದುದ ವಂಚನೆ ಮಾಡದಿದ್ದರೆ ಅದು ನೇಮ; ನಡೆದು ತಪ್ಪದಿದ್ದರೆ ನೇಮ, ನುಡಿದು ಹುಸಿಯದಿದ್ದರೆ ನೇಮ. ನಮ್ಮ ಕೂಡಲಸಂಗನ ಶರಣರು ಬಂದರೆ ಒಡೆಯರಿಗೊಡವೆಯನೊಪ್ಪಿಸುವದೇ ನೇಮ.