ಬಸವಣ್ಣ   
  ವಚನ - 237     
 
ಸ್ವಾಮಿ ಭೃತ್ಯಸಂಬಂಧಕ್ಕೆ ಆವುದು ಪಥವೆಂದರೆ: ದಿಟವ ನುಡಿವುದು, ನುಡಿದಂತೆ ನಡೆವುದು. ನುಡಿದು ಹುಸಿವ, ನಡೆದು ತಪ್ಪುವ ಪ್ರಪಂಚಿಯನೊಲ್ಲ ಕೂಡಲಸಂಗಮದೇವ.