ಬಸವಣ್ಣ   
  ವಚನ - 244     
 
ಕಂಡ ಭಕ್ತರಿಗೆ ಕೈಮುಗಿವಾತನೇ ಭಕ್ತ; ಮೃದುವಚನವೇ ಸಕಲ ಜಪಂಗಳಯ್ಯಾ, ಮೃದುವಚನವೇ ಸಕಲ ತಪಂಗಳಯ್ಯಾ, ಸದುವಿನಯವೇ ಸದಾಶಿವನೊಲುಮೆಯಯ್ಯಾ, ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ.