ಬಸವಣ್ಣ   
  ವಚನ - 245     
 
ʼಇತ್ತ ಬಾರಯ್ಯಾ, ಇತ್ತ ಬಾರಯ್ಯಾʼ ಎಂದು ಭಕ್ತರೆಲ್ಲರೂ ಕೂರ್ತು ಹತ್ತೆ ಕರೆಯುತಿರೆ, ಮತ್ತೆ ಕೆಲಕ್ಕೆ ಹೋಗಿ, ಶರಣೆಂದು ಹಸ್ತ-ಬಾಯನೆ ಮುಚ್ಚಿ, ಕಿರಿದಾಗಿ ಭೃತ್ಯಾಚಾರವ ನುಡಿದು, ವಿನಯವದ್ಧ್ಯಾನವುಳ್ಳರೆ ಎತ್ತಿಕೊಂಬನಯ್ಯಾ, ಕೂಡಲಸಂಗಮದೇವ ಪ್ರಮಥರ ಮುಂದೆ.