ಬಸವಣ್ಣ   
  ವಚನ - 246     
 
ಭಕ್ತ ಭಕ್ತನ ಮನೆಗೆ ಬಂದರೆ, ಭೃತ್ಯಾಚಾರವ ಮಾಡಬೇಕು: ಕರ್ತನಾಗಿ ಕಾಲ ತೊಳೆಯಿಸಿಕೊಂಡರೆ, ಹಿಂದೆ ಮಾಡಿದ ಭಕ್ತಿಗೆ ಹಾನಿ! ಲಕ್ಷಗಾವುದ ದಾರಿಯ ಹೋಗಿ ಭಕ್ತನು ಭಕ್ತನ ಕಾಂಬುದು ಸದಾಚಾರ; ಅಲ್ಲಿ ಕೂಡಿ ದಾಸೋಹವ ಮಾಡಿದರೆ ಕೂಡಿಕೊಂಬನು ನಮ್ಮ ಕೂಡಲಸಂಗಮದೇವನು.