ಬಸವಣ್ಣ   
  ವಚನ - 251     
 
ಕರಗಿಸಿ ಎನ್ನ ಮನದ ಕಾಳಿಕೆಯ ಕಳೆಯಯ್ಯಾ; ಒರೆ ಬಣ್ಣಕ್ಕೆ ತಂದೆನ್ನ ಪುಟವಿಕ್ಕಿ ನೋಡಯ್ಯಾ; ಕಡಿಹಕ್ಕೆ ಬಡಿಹಕ್ಕೆ ತಂದೆನ್ನ ಕಡೆಯಾಣಿಯ ಮಾಡಿ, ನಿಮ್ಮ ಶರಣರ ಪಾದಕ್ಕೆ ತೊಡಿಗೆಯ ಮಾಡಿ ಸಲುಹು, ಕೂಡಲಸಂಗಮದೇವಾ!