ಬಸವಣ್ಣ   
  ವಚನ - 253     
 
ಅವರಿವರೆನ್ನದೆ ಚರಣಕ್ಕೆರಗಲು ಅಯ್ಯತನವೇರಿ, ಬೆಬ್ಬನೆ ಬೆರಿವೆ ನಾನು: ಕೆಚ್ಚು ಬೆಳೆಯಿತ್ತಯ್ಯಾ! ಆ ಕೆಚ್ಚಿಂಗೆ ಕಿಚ್ಚನಿಕ್ಕಿ ಸುಟ್ಟು ಬೆಳ್ಳುಕನ ಮಾಡಿ ಬೆಳುಗಾರದಂತೆ ಮಾಡು, ಕೂಡಲಸಂಗಮದೇವಾ.