ಬಸವಣ್ಣ   
  ವಚನ - 279     
 
ಆಡಿ ಅಳುಪದಿರಾ, ಲೇಸಮಾಡಿ ಮರುಗದಿರಾ, ಎಲೆ ಮನವೇ: ಕೂಡಿ ತಪ್ಪದಿರಾ, ಬೇಡಿದವರಿಗಿಲ್ಲೆನ್ನದಿರು, ಕಂಡಾ, ಮನವೇ. ನಾಡ ಮಾತು ಬೇಡ, ಸೆರಗೊಡ್ಡಿ ಬೇಡು ಕೂಡಲಸಂಗನ ಶರಣರಾ.