ಬಸವಣ್ಣ   
  ವಚನ - 291     
 
ಹಾಲ ತೊರೆಗೆ ಬೆಲ್ಲದ ಕೆಸರು, ಸಕ್ಕರೆಯ ಮಳಲು, ತವರಾಜದ ನೊರೆ ತೆರೆಯಂತೆ, ಆದ್ಯರ ವಚನವಿರಲು, ಬೇರೆ ಬಾವಿಯ ತೋಡಿ ಉಪ್ಪನೀರನುಂಬವನ ವಿಧಿಯಂತೆ ಆಯಿತ್ತೆನ್ನ ಮತಿ, ಕೂಡಲಸಂಗಮದೇವಾ.