ಬಸವಣ್ಣ   
  ವಚನ - 304     
 
ಒಡೆಯರಿಗೆ ಒಡವೆಯನೊಪ್ಪಿಸಲಾರದೆ ಮೊರೆಯಿಡುವ ಮನವ ನಾನೇನೆಂಬೆ? ನೆತ್ತಿಯಲ್ಲಿ ಅಲಗ ತಿರುಹುವಂತಪ್ಪ ವೇದನೆಯಹುದೆನಗೆ! ಕೊಯ್ದಮೂಗಿಂಗೆ ಕನ್ನಡಿಯ ತೋರುವಂತಪ್ಪ ವೇದನೆಯಹುದೆನಗೆ! ಬೆಂದ ಹುಣ್ಣ ಕಂಬಿಯಲ್ಲಿ ಕೀಸುವಂತಪ್ಪ ವೇದನೆಯಹುದೆನಗೆ! ಕೂಡಲಸಂಗಮದೇವ ಮಾಡಿ ನೋಡುವ ಹಗರಣವ ನಾ ಮಾಡಿಹೆನೆಂದರೆ ಮನಕ್ಕೆ ಮನ ನಾಚದೆ, ಅಯ್ಯಾ.