ಬಸವಣ್ಣ   
  ವಚನ - 321     
 
ದಾಸಿದೇವ ತನ್ನ ವಸ್ತ್ರವನಿತ್ತು ತವನಿಧಿಯ ಪ್ರಸಾದವ ಪಡೆದ. ಸಿರಿಯಾಳ ತನ್ನ ಮಗನನಿತ್ತು ಪ್ರಾಣ-ಪ್ರಸಾದವ ಪಡೆದ. ಬಲ್ಲಾಳದೇವ ತನ್ನ ವಧುವನಿತ್ತು ಸಮತಾಪ್ರಸಾದವ ಪಡೆದ. ಇವರೆಲ್ಲರೂ ತಮತಮಗೆ ಮಾಡಿ ಹಡೆದರು ಸಮ್ಯಕ್‍ ಪದವಿಯನು. ನಾನೇನನೂ ಅರಿಯದ ಭಕ್ತಿಯ ಬಡವಂಗೆ ಕರುಣಿಸು, ಕೂಡಲಸಂಗಮದೇವಾ.