ಬಸವಣ್ಣ   
  ವಚನ - 359     
 
ಕಾಮವ ತೊರೆದಾತ, ಹೇಮವ ಜರೆದಾತ, ಭಾನುವಿನ ಉದಯಕ್ಕೆ ಒಳಗಾಗದ ಶರಣನು! ಆಗಳೂ ನಿಮ್ಮ ಮಾಣದೆ ನೆನೆವರ ಮನೆಯಲು ಶ್ವಾನನಾಗಿರಿಸು, ಮಹಾದಾನಿ ಕೂಡಲಸಂಗಮದೇವಾ.