ಬಸವಣ್ಣ   
  ವಚನ - 363     
 
ಆವಾವ ಭಾವದಲ್ಲಿ ಮಾಡಿ ಕೂಡಿಹೆವೆಂಬರ ಬಾಗಿಲ ತೋರಯ್ಯಾ. ತನುವನೊಪ್ಪಿಸಿದವರ, ಮನವನೊಪ್ಪಿಸಿದವರ, ಧನವನೊಪ್ಪಿಸಿದವರ ಬಾಗಿಲ ತೋರಯ್ಯಾ. ಇವನೆಲ್ಲವನೊಪ್ಪಿಸಿ ಜಂಗಮವೆನ್ನವರೆನ್ನವರೆನ್ನವರೆಂಬವರ ಕೆರಹ ಹೊತ್ತಿರಿಸೆನ್ನನು, ಕೂಡಲಸಂಗಮದೇವಾ.