ಬಸವಣ್ಣ   
  ವಚನ - 367     
 
ಸೂರ್ಯನುದಯ ತಾವರೆಗೆ ಜೀವಾಳ, ಚಂದ್ರಮನುದಯ ನೆಯ್ದಿಲೆಗೆ ಜೀವಾಳ. ಕೂಪರ ಠಾವಿನಲ್ಲಿ ಕೂಟ ಜೀವಾಳ, ಒಲಿದ ಠಾವಿನಲ್ಲಿ ನೋಟ ಜೀವಾಳವಯ್ಯಾ; ಕೂಡಲಸಂಗನ ಶರಣರ ಬರವೆನಗೆ ಪ್ರಾಣ ಜೀವಾಳವಯ್ಯಾ.