ಬಸವಣ್ಣ   
  ವಚನ - 379     
 
ಮನ ಮನ ಬೆರಸಿದಲ್ಲಿ ತನು ಕರಗದಿದ್ದರೆ, ಸೋಂಕಿನಲ್ಲಿ ಪುಳಕಂಗಳು ಹೊರಹೊಮ್ಮದಿದ್ದರೆ, ಕಂಡಾಗಳಶ್ರುಜಲಂಗಳು ಸುರಿಯದಿದ್ದರೆ, ನುಡಿವಲ್ಲಿ ಗದ್ಗದಂಗಳು ಹೊರಹೊಮ್ಮದಿದ್ದರೆ- ಕೂಡಲಸಂಗಮದೇವರ ಭಕ್ತಿಗಿದು ಚಿಹ್ನವೆ?,- ಎನ್ನಲ್ಲಿವಿಲ್ಲವಾಗಿ, ಆನು ಡಂಭಕ ಕಾಣಿರೇ!