ಬಸವಣ್ಣ   
  ವಚನ - 390     
 
ಎನ್ನ ಆಪತ್ತು, ಸುಖ-ದುಃಖವನಿನ್ನಾರಿಗೆ ಹೇಳುವೆ? ಶರಣಸ್ಥಲದವರಿಗೆ ಹೇಳಿದರೆ ಮಚ್ಚರ! ಸವತಿ-ಸಕ್ಕರೆ, ಬೇವು-ಬೆಲ್ಲ ಉಂಟೆ? ಇನ್ನಾರಿಗೆ ಹೇಳುವೆ? ಕೂಡಲಸಂಗಮದೇವಾ, ಜಂಗಮವಾಗಿ ಬಂದು ಎನ್ನ ಮನದ ಸೂತಕವ ಕಳೆಯಾ.