ಬಸವಣ್ಣ   
  ವಚನ - 399     
 
ಭಿತ್ತಿಯಿಲ್ಲದೆ ಬರೆಯಬಹುದೆ ಚಿತ್ತಾರವ? ಬಿತ್ತಿ ಬೆಳೆಯಬಹುದೆ ಧರೆಯಿಲ್ಲದೆ? ಜಂಗಮವಿಲ್ಲದೆ ಮಾಡಬಹುದೆ? ರೂಢೀಶನ ಭೇದಿಸಬಹುದೆ ? ಒಡಲಿಲ್ಲದ ನಿರಾಳಕರ್ತೃ ಕೂಡಲಸಂಗಮದೇವ ಜಂಗಮಮುಖವಾದನಾಗಿ ಮತ್ತೊಂದನರಿಯೆನಯ್ಯಾ.