ಬಸವಣ್ಣ   
  ವಚನ - 423     
 
ಹೊಸತಿಲ ಪೂಜಿಸಿ ಹೊರವಟ್ಟು ಹೋದ ಒಕ್ಕಲಿತಿಯಂತಾಯಿತ್ತೆನ್ನ ಭಕ್ತಿ! ಜಂಗಮವೆನ್ನೊಡೆಯರೆಂದು ಒಕ್ಕುದ ಕೊಂಡು ಉದಾಸೀನವ ಮಾಡಿದರೆ, ಇಹಲೋಕಕ್ಕೆ ದೂರ, ಪರಲೋಕಕ್ಕೆ ದೂರ! ಕೂಡಲಸಂಗಮದೇವ ಅಘೋರ ನರಕದಲ್ಲಿಕ್ಕುವ!