ಬಸವಣ್ಣ   
  ವಚನ - 432     
 
ಕಂದಿದೆನಯ್ಯಾ ಎನ್ನ ನೋಡುವರಿಲ್ಲದೆ; ಕುಂದಿದೆನಯ್ಯಾ ಎನ್ನ ನುಡಿಸುವರಿಲ್ಲದೆ; ಬಡವಾದೆನಯ್ಯಾ ಎನ್ನ ತನು, ಮನ, ಧನವ ಬೇಡುವರಿಲ್ಲದೆ? ಕಾಡುವ ಬೇಡುವ ಶರಣರ ತಂದು ಕಾಡಿಸು ಬೇಡಿಸಯ್ಯಾ ಕೂಡಲಸಂಗಮದೇವಾ.